Literature

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 7

ಬೌದ್ಧಸಂನ್ಯಾಸಿಯಾದ ಅಶ್ವಘೋಷನು ಸ್ವಮತಪ್ರಚಾರ ಮತ್ತು ತತ್ತ್ವೋಜ್ಜೀವನಕ್ಕಾಗಿ ಕಾವ್ಯದ ಮಾಧ್ಯಮವನ್ನು ಬಳಸಿಕೊಂಡಿರುವುದು ಅವನ ಮಾತುಗಳಿಂದಲೇ ಸ್ಪಷ್ಟವಾಗಿದೆ. ವಿಶೇಷತಃ ಕಹಿಯಾದ ಔಷಧವನ್ನು ಸಿಹಿಯಾದ ಜೇನಿನ ಅನುಪಾನದಿಂದ ಉಣಿಸುವ ದೃಷ್ಟಾಂತ ಮುಂದಿನ ಎಷ್ಟೋ ಆಲಂಕಾರಿಕರಿಗೆ ಅಚ್ಚುಕಟ್ಟಾಗಿ ಒದಗಿಬಂದಿತು.[1]

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 6

ಮಹಾಭಾರತದ ಮತ್ತೊಂದು ಸ್ವಾರಸ್ಯವೆಂದರೆ ಅದರ ಕಥೆಯ ಉದ್ದಕ್ಕೂ ನಿರ್ಣಾಯಕಘಟ್ಟಗಳಲ್ಲಿ ಕೃತಿಕಾರರಾದ ವ್ಯಾಸರು ಬಂದುಹೋಗುತ್ತಾರೆ; ಮುಖ್ಯಪಾತ್ರಗಳನ್ನೆಲ್ಲ ಉದ್ಬೋಧಿಸುತ್ತಾರೆ. ಹೀಗೆ ಕವಿಯೇ ತನ್ನ ಕೃತಿಯಲ್ಲಿ ಪಾತ್ರವಾಗಿ ಬರುವುದು ರಾಮಾಯಣದಲ್ಲಿ ಕೂಡ ಉಂಟು. ಆದರೆ ಅದು ತೀರ ವಿರಳ. ರಾಮಾಯಣದ ಮೊದಲಿಗೆ ಪೀಠಿಕಾಸರ್ಗದಲ್ಲಿ ವಾಲ್ಮೀಕಿಮುನಿಗಳು ಪ್ರವೇಶಿಸಿದ ಬಳಿಕ ಮತ್ತೆ ಕಾಣಿಸಿಕೊಳ್ಳುವುದು ಉತ್ತರಕಾಂಡದಲ್ಲಿಯೇ.[1] ಇಲ್ಲವರು ಸೀತಾರಾಮರ ಜೀವನದಲ್ಲಿ ಪ್ರಮುಖಪಾತ್ರವನ್ನೇ ವಹಿಸುವರಾದರೂ ಅಷ್ಟು ಹೊತ್ತಿಗೆ ಆ ಪಾತ್ರಗಳ ಸಕ್ರಿಯಜೀವನ ಮುಗಿಯುವ ಹಂತಕ್ಕೆ ಬಂದಿರುತ್ತದೆ. ಆದರೆ ವ್ಯಾಸರ ಪಾತ್ರ ಹೀಗಲ್ಲ.

Kathāmṛta - 25 - Lāvaṇakalambaka - The Story of Phalabhūti

Vatsarāja called Yaugandharāyaṇa in secret and said, “My friend! Thanks to your political acumen all kings have been defeated. I don’t think anyone will betray me. But I still have my doubts about Brahmadatta!” He replied, “O king! I know Brahmadatta won’t betray you for sure; if he does it would be his death!” Saying so he narrated the following story —

 

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 5

ಈ ಎಲ್ಲ ಅಂಶಗಳಿಗಿಂತ ಮಿಗಿಲಾಗಿ ವೇದವ್ಯಾಸರು ಮಹಾಕವಿಗಿರಬೇಕಾದ ಒಂದು ಮಹಾಲಕ್ಷಣವನ್ನು ತಮ್ಮ ಕಾವ್ಯದ ಪರಿಣಾಮವೆಂಬಂತೆ ಹೀಗೆ ರೂಪಿಸಿದ್ದಾರೆ:

ಇತಿಹಾಸಪ್ರದೀಪೇನ ಮೋಹಾವರಣಘಾತಿನಾ |

ಲೋಕಗರ್ಭಗೃಹಂ ಕೃತ್ಸ್ನಂ ಯಥಾವತ್ ಸಂಪ್ರಕಾಶಿತಮ್ ||

(ಮಹಾಭಾರತದ ಕುಂಭಕೋಣಂ ಆವೃತ್ತಿ, ೧.೯೬.೧೦೩)

Kathāmṛta - 24 - Lāvaṇakalambaka - The Story of the Merchant Devadāsa

Yaugandharāyaṇa then spoke to Vatsarāja. He said ‘O king, the divine is on your side and you have immense strength too. We are experts in the art of governance. Therefore, set out on your digvijaya – conquering expedition at the earliest.’ Listening to his Prime Minister’s suggestion, the king of Vasta said – ‘Let this wait for a moment. There can be several impediments for auspicious activities.  Therefore, I will first worship Śiva. Is it even possible to fulfil our dreams without the blessings of Śiva?

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 4

ಎಷ್ಟೋ ಬಾರಿ ನರಕವಿಗಳೂ ವರಕವಿಗಳೂ ತಮ್ಮ ಕಾವ್ಯಗಳ ಮಟ್ಟಿಗೆ ಮೌಲ್ಯನಿಷ್ಠರಾಗಿರುವರಲ್ಲದೆ ಅವುಗಳ ಆಚೆಗೆ ಸಾಮಾನ್ಯಮಾನವರಂತೆಯೇ ಮೌಲ್ಯವಿಕ್ಷೋಭೆಗಳೊಳಗೇ ಒದ್ದಾಡುತ್ತಿರುತ್ತಾರೆ. ಋಷಿಕವಿಗಳು ಮಾತ್ರ ತಮ್ಮ ಕೃತಿಯಿಂದಾಚೆಗೂ ಮೌಲ್ಯಬದ್ಧರಾಗಿರುತ್ತಾರೆ. ಈ ಕಾರಣದಿಂದಲೇ ಅವರ ಭಣಿತಿ ಮಾತ್ರವಲ್ಲದೆ ಬದುಕೂ ಕಾವ್ಯವೆನಿಸುತ್ತದೆ. ಇಂಥ ಒಂದು ಮಹತ್ತ್ವದ ಸಂಗತಿಯನ್ನು ಉತ್ತರಕಾಂಡದ ಕಡೆಯಲ್ಲಿ ಕಾಣಬಹುದು. ಪರಿತ್ಯಕ್ತಳಾದ ಸೀತೆಯನ್ನು ಮತ್ತೆ ರಾಮನು ಸ್ವೀಕರಿಸುವಂತೆ ಮಾಡುವಲ್ಲಿ ಆಸ್ಥೆಯುಳ್ಳ ವಾಲ್ಮೀಕಿಮುನಿಗಳು ಸೀತೆಯ ಚಾರಿತ್ರ್ಯಶುದ್ಧಿಯನ್ನು ಶಪಥಪೂರ್ವಕವಾಗಿ ಸಾರುತ್ತಾರೆ. ಆ ಸರ್ಗಕ್ಕೆ “ವಾಲ್ಮೀಕಿಪ್ರತ್ಯಯದಾನ”ವೆಂದೇ ಹೆಸರು (೭.೯೬).

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 3

ಅನಂತರ ಚತುರ್ಮುಖಬ್ರಹ್ಮನೇ ಮಹರ್ಷಿಗಳ ಬಳಿ ಬರುತ್ತಾನೆ. ಆ ಹೊತ್ತಿನಲ್ಲಿ ಕೂಡ ವಾಲ್ಮೀಕಿಮುನಿಗಳಿಗೆ ಆ ಶ್ಲೋಕದ್ದೇ ಗುಂಗು: ತದ್ಗತೇನೈವ ಮನಸಾ ವಾಲ್ಮೀಕಿರ್ಧ್ಯಾನಮಾಸ್ಥಿತಃ, ೧.೨.೨೮. ಕ್ರೌಂಚವಧೆಯ ಧರ್ಮಾಧರ್ಮಗಳ ವಿಚೇಚನೆಯೂ ಕ್ರೌಂಚಿಗೊದಗಿದ ವೈಧವ್ಯಕ್ಕೆ ಮರುಕವೂ ಮತ್ತೆ ಮತ್ತೆ ಸುಳಿಸುತ್ತುತ್ತಿತ್ತು. ಇದು ಕವಿಯೊಬ್ಬ ತನ್ನ ಕಾವ್ಯಕ್ಕೆ ಪ್ರೇರಕವಾದ ಘಟನೆಯನ್ನು ಮತ್ತೆ ಮತ್ತೆ ಪರ್ಯಾಲೋಚಿಸುವ ಪರಿಯೇ ಹೌದು. ಜಗತ್ತಿನ ಭಾವಗಳು ಈ ಮಟ್ಟದ ಕ್ಷೋಭೆಯನ್ನುಂಟುಮಾಡದೆ ಕಾವ್ಯರಚನೆಗೆ ತಕ್ಕ ಪ್ರೇರಣೆ ಒದಗಿಬರದು. ಹೀಗೆ ಪ್ರೇರಿತನಾದ ಕವಿ ತನ್ನ ತಾರ್ಕಿಕವಾದ ಅರಿವನ್ನೂ ಮೀರಿ ಭಾವಪೂರ್ಣವಾದ ಪ್ರತಿಕ್ರಿಯೆಯನ್ನು ನೀಡುವುದೇ ನಿಜವಾದ ಕಾವ್ಯ.