‘ಗೊಲ್ಗೊಥಾ’ ಕಾವ್ಯದ ರಸಸಿದ್ಧಿ
ಉನ್ನತ ಮಟ್ಟದ ವಿದ್ವಾಂಸರೆಂದು ಪ್ರಖ್ಯಾತರಾಗಿದ್ದ ಗೋವಿಂದ ಪೈಗಳಿಗೆ ಶ್ರೇಷ್ಠ ಕವಿಗಳೆಂಬ ಯುಕ್ತ ಖ್ಯಾತಿ ಬಂದದ್ದು ಬಹುಶಃ ‘ಗೊಲ್ಗೊಥಾ’ ಮತ್ತು ‘ವೈಶಾಖಿ’ ಖಂಡಕಾವ್ಯಗಳಿಂದಲೇ. ಇವನ್ನು ಖಂಡಕಾವ್ಯಗಳೆನ್ನುವುದಕ್ಕಿಂತ ಮಹಾಕಾವ್ಯಖಂಡಗಳೆಂದು (Epic Fragments) ಗುರುತಿಸುವುದು ಒಳಿತೆಂಬುದು ಎಸ್. ಅನಂತನಾರಾಯಣ ಅವರ ಅಭಿಪ್ರಾಯ.[1] ಅವರ ಈ ನಿಲವು ಒಪ್ಪುವಂಥದ್ದೇ ಆಗಿದೆ. ಈ ಎರಡು ಕೃತಿಗಳಿಂದಲೇ ಪೈಗಳನ್ನು ನಮ್ಮ ನಾಡಿನ ಮೊತ್ತಮೊದಲ ರಾಷ್ಟ್ರಕವಿಯೆಂದು ಅಂಗೀಕರಿಸಿದಲ್ಲಿ ತಪ್ಪಾಗದು. ಇವನ್ನು ಕುರಿತು ಅನೇಕ ವಿಮರ್ಶಕರೂ ವಿದ್ವಾಂಸರೂ ಸಾಕಷ್ಟು ವಿಶದವಾಗಿ ಬರೆದಿದ್ದಾರೆ. ಇವರ ಪೈಕಿ ಜಿ. ಪಿ. ರಾಜರತ್ನಂ, ರಂ. ಶ್ರೀ. ಮುಗಳಿ, ಜಿ. ವರದರಾಜರಾವ್, ಎಸ್. ಎಂ. ವೃಷಭೇಂದ್ರಸ್ವಾಮಿ, ಎಲ್.
