Literature

On Poetry

            Poetry concerns itself with the activities of our inner world. It paints in a motion picture the blossoming of our heart. It sheds light on those aspects of human life—regardless of their significance—that generally escape our attention. The poet’s eye is a veritable camera lens that captures in minute detail the attributes of everything it focuses on. The mirror of his heart reflects those forms and features of objects toward which we turn a blind eye; the cavern of his mind reverberates the sighs and whispers that are a decibel too short to appeal to our ears.

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಉಪಸಂಹಾರ

ಭಟ್ಟರು ಭಾರತೀಯವಿದ್ಯಾಕ್ರಮದಲ್ಲಿ ಪಾಶ್ಚಾತ್ಯಪ್ರಭಾವವು ಮಾಡಿದ ಪರಿಣಾಮವನ್ನು ತುಂಬ ಸಮರ್ಥವಾಗಿ ವಿವೇಚಿಸಿದ್ದಾರೆ. ಮಾತ್ರವಲ್ಲ, ಇಂಥ ಸತ್ತ್ವಶೂನ್ಯಚಿಂತನಕ್ರಮವು ಪಾಶ್ಚಾತ್ಯಸಂಪರ್ಕಕ್ಕಿಂತ ಮೊದಲೇ ಉಂಟಾಗಿತ್ತೆಂದೂ ನಮ್ಮ ಪರಂಪರೆಯ ಗ್ರಂಥಗಳಲ್ಲಿ ಕಂಡುಬರುವ ತತ್ತ್ವಸ್ಖಾಲಿತ್ಯವನ್ನು ಗಮನಿಸಿ ತರ್ಕಿಸುತ್ತಾರೆ (ಪು. ೧೦೯-೧೧೨). ಇಂಥ ಮಧ್ಯಯುಗದ ಸತ್ತ್ವಶೂನ್ಯತೆಗೆ ಮುಖ್ಯಕಾರಣ ಇಸ್ಲಾಮಿನ ಬರ್ಬರವಾದ ಆಕ್ರಮಣದಿಂದ ಉಂಟಾದ ರಾಜಕೀಯ-ಸಾಮಾಜಿಕ-ಸಾಂಸ್ಕೃತಿಕ-ಧಾರ್ಮಿಕಕ್ಷೋಭೆಯೆಂಬುದನ್ನು ಅವರು ಕಂಠೋಕ್ತವಾಗಿ ಹೇಳದಿರುವುದು ಆಶ್ಚರ್ಯ ಮಾತ್ರವಲ್ಲ, ಅನ್ಯಾಯ ಕೂಡ. ದಿಟವೇ, ಯಾವುದೇ ಸಂಸ್ಕೃತಿಯು ಭೋಗಪಾರಮ್ಯವನ್ನವಲಂಬಿಸಿದಾಗ ಹೊರಗಿನ ಶತ್ರುಗಳ ಅನುಪಸ್ಥಿತಿಯಲ್ಲಿಯೂ ಹ್ರಾಸವನ್ನು ಹೊಂದುತ್ತದೆ.

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಶಾಸ್ತ್ರ-ಕಾವ್ಯ

ಭಟ್ಟರು ಶಾಸ್ತ್ರ-ಕಾವ್ಯಗಳ ಅಭೇದವನ್ನು ಪ್ರತಿಪಾದಿಸುತ್ತ ಉಭಯತ್ರ ಶಬ್ದಾರ್ಥಗಳ ಸಾಮರಸ್ಯ ಮತ್ತು ಅನುಭವದ ಅನನ್ಯತೆಗಳಿರಬೇಕೆಂದು ಹೇಳುತ್ತಾರೆ (ಪು. ೧೮೧). ಇದು ಉಪಾದೇಯವೇ ಆದರೂ ಕಾವ್ಯವು ವಿಭಿನ್ನಭಾಷೆಗಳಿಗೆ ಅನುವಾದಗೊಂಡಾಗ, ಸಂಗೀತವು ವಿಭಿನ್ನವಾದ್ಯಮಾಧ್ಯಮಗಳಿಗೆ ಅನೂದಿತವಾದಾಗ ಮೂಲದ ಸ್ವಾರಸ್ಯಗಳಲ್ಲಿ ಹೆಚ್ಚು-ಕಡಮೆಗಳಾಗುತ್ತವೆ. ಇದು ಸಮರ್ಥಾನುವಾದಗಳಲ್ಲಿಯೂ ಕಂಡುಬರುವಂಥದ್ದು. ಈ ಅರ್ಥದಲ್ಲಿ ಎಲ್ಲ ಬಗೆಯ ಕಾವ್ಯ-ಕಲಾನುವಾದಗಳೂ ಪುನಃಸೃಷ್ಟಿಗಳೇ. ಜೊತೆಗೆ, ಇವುಗಳ ಸಾಮ್ರಾಜ್ಯ ವ್ಯಂಜನಾವೃತ್ತಿಯಲ್ಲಿ. ಈ ಮಾತನ್ನು ಶಾಸ್ತ್ರಕ್ಕೆ ಅನ್ವಯಿಸಲಾಗುವುದಿಲ್ಲ. ಏಕೆಂದರೆ ಅದು ಅಭಿಧೈಕಪ್ರಧಾನವಾದ, ತಾತ್ಪರ್ಯೈಕಲಕ್ಷ್ಯದ ಅಭಿವ್ಯಕ್ತಿ. ಅದು ಅನುಮಾನವನ್ನು ಹಿಡಿದು ಸಾಗುತ್ತದಲ್ಲದೆ ಧ್ವನಿಯನ್ನಲ್ಲ.

The Conversation of the Bhagavad Gita

In a work that begins in this fashion, Bhagavan Veda Vyasa throws up his hands helplessly in despair in the end, expressing his dejection. The lesson that strikes us is this: things like victory and defeat that assume great importance in the narrative are the expressed forms of the polarized elements of Realization and ignorance. In summary, nobody wins, nobody loses; everybody is merely drawn in by the Great Current of Life.

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವೇದದ ಕಾವ್ಯತ್ವ

ಬ್ರಹ್ಮನನ್ನು ಆದಿಕವಿಯೆಂದು ಹಲವೆಡೆ ಭಟ್ಟರು ಪ್ರತಿಪಾದಿಸಿದ್ದಾರೆ; ಚತುರ್ಮುಖಬ್ರಹ್ಮನ ಮೂಲಕ ಹೊಮ್ಮಿದ ವೇದಗಳಿಗೇ ಆದಿಮಕಾವ್ಯತ್ವವನ್ನು ಆರೋಪಿಸುತ್ತಾರೆ. ಇದಕ್ಕೆ ಭಾಗವತಪುರಾಣದ ಪ್ರಥಮಶ್ಲೋಕವನ್ನು ಆಧಾರವಾಗಿ ನೀಡುತ್ತಾರೆ (ಪು. ೧೮೦, ೨೦೫). ಇದೆಲ್ಲ ವಾಲ್ಮೀಕಿಯೊಬ್ಬನನ್ನೇ ಆದಿಕವಿಯೆಂದು ಗುರುತಿಸಬಾರದೆಂಬ ಇಂಗಿತದಿಂದಲೇ ಹೊರಟ ವಾದಕ್ರಮ. ದಿಟವೇ, ನಮ್ಮೀ ಜಗತ್ತಿನಲ್ಲಿ ಯಾವುದು ಆದಿ, ಯಾವುದು ಮೂಲ, ಯಾವುದು ಸರ್ವಪ್ರಥಮ ಎಂಬ ಚರ್ಚೆಯಲ್ಲಿ ನಿಸ್ತಾರ ಕಾಣುವುದು ಕಷ್ಟ. ಇಲ್ಲಿಯ ಆದಿ-ಮೂಲ-ಪ್ರಥಮವ್ಯವಹಾರಗಳೆಲ್ಲ ಸಾಮಾನ್ಯವಾದ ವ್ಯಾವಹಾರಿಕಸ್ತರದ್ದು. ಇದನ್ನು ತುಂಬ ಗಂಭೀರವಾಗಿ ಗಣಿಸಿ ವಾದಿಸುವುದೆಷ್ಟು ಅಯುಕ್ತವೋ ಅದಕ್ಕೆ ಅಷ್ಟೇ ತೀವ್ರವಾದ ಪ್ರತಿರೋಧವೂ ಅಯುಕ್ತ. ಇದನ್ನು ವಿದ್ವದ್ವಲಯವೆಲ್ಲ ಪ್ರಾಯಿಕವಾಗಿ ಬಲ್ಲುದು.

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವೇದೋಪವಸತಿ

ಭಟ್ಟರು ಕಾವ್ಯಮೀಮಾಂಸೆಯ ಮೂಲಾಧಾರವನ್ನು ಕುರಿತಂತೆ ಮತ್ತೆ ಮತ್ತೆ ವೇದ-ವೇದಾಂಗಗಳ ಮಹತ್ತ್ವವನ್ನು ಪ್ರತಿಪಾದಿಸುತ್ತಾರೆ. ವೇದದಿಂದ ರಸತತ್ತ್ವವೂ ವೇದಾಂಗವಾದ ವ್ಯಾಕರಣದಿಂದ ಧ್ವನಿತತ್ತ್ವವೂ ಬಂದಿವೆಯೆಂಬುದು ಅವರ ಮುಖ್ಯಾವಧಾರಣೆ. ಇದನ್ನು ವಿದ್ವಜ್ಜಗತ್ತು ಒಪ್ಪಿಯೂ ಇದೆ. ಈ ಬಗೆಯ ಆರ್ಷೋಪವಸತಿಯಿಂದ ಭಾರತೀಯವಿದ್ಯೆಗಳಿಗೆ ಅದೊಂದು ಬಗೆಯ ಸಂಪ್ರದಾಯಶುದ್ಧಿಯೂ ಅವಿಚ್ಛಿನ್ನತೆಯೂ ಬರುವುದಲ್ಲದೆ ದಾರ್ಶನಿಕೈಕ್ಯವೂ ಸಿದ್ಧಿಸುವುದೆಂಬುದು ಸತ್ಯ. ಆದರೆ ಇದು ಕೇವಲ ರೂಪಸ್ತರದ್ದಲ್ಲದೆ ಸ್ವರೂಪಸ್ತರದ್ದಲ್ಲ. ಕಾವ್ಯಮೀಮಾಂಸೆಯ ಅಂಗವಾದ ಛಂದಸ್ಸೋ ಧ್ವನಿಯೋ ವೇದಾಂಗದಿಂದ ಪ್ರವರ್ತಿತವಾಯಿತೆಂದು ಪ್ರತಿಪಾದಿಸುವುದು ಕೇವಲ ಐತಿಹಾಸಿಕಮಹತ್ತ್ವದ್ದೋ ಭಾವನಾತೃಪ್ತಿಯದೋ ಸಂಗತಿಯಾದರೆ, ಇದಕ್ಕಿಷ್ಟು ಮಹತ್ತ್ವ ದಕ್ಕದು.

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವಿವರ್ತವಾದ, ವಿಜ್ಞಾನವಾದ

ಇದೇ ರೀತಿ ಭಾರತೀಯರ ಪ್ರಕಾರ ವಸ್ತು ಮತ್ತು ಅದನ್ನು ಕುರಿತಾದ ಜ್ಞಾನಗಳ ಪೈಕಿ ಜ್ಞಾನವೇ ಹೆಚ್ಚು ಸತ್ಯವಾದುದೆಂದು ಭಟ್ಟರು ಭಾವಿಸುತ್ತರೆ (ಪು. ೭೭). ಇದು ಈಚಿನ ಅನೇಕಚಿಂತಕರು ಎತ್ತಿಹಿಡಿಯುವ ಮತ. ವಿಶೇಷತಃ ನವಭಾರತೀಯದಾರ್ಶನಿಕರು ಹೆಚ್ಚಾಗಿ ಇಂಥ ಅಭಿಪ್ರಾಯವನ್ನು ಪ್ರಕಟಿಸುತ್ತಾರೆ. ಮಾತ್ರವಲ್ಲ, ಈ ವಾದವು ಬುದ್ಧಿಜೀವಿಗಳಿಗೆ ತುಂಬ ಆಕರ್ಷಕವೂ ಹೌದು; ಮತ್ತಿದು ಅದೆಷ್ಟೋ ಮಂದಿ ಮುಗ್ಧರಾದ ಪ್ರಾಮಾಣಿಕರು ಒಪ್ಪುವಂಥದ್ದೂ ಆಗಿದೆ. ಆದರೆ ನಿರ್ವಿಶೇಷವಾದ ಸಾರ್ವತ್ರಿಕಾನುಭವದ ಹಿನ್ನೆಲೆಯಲ್ಲಿ ಕಂಡಾಗ ಇದು ಸತ್ಯವಲ್ಲವೆಂದು ತಿಳಿಯದಿರದು. ವಸ್ತುತಃ ಭಟ್ಟರ ಈ ನಿಲವು ಬೌದ್ಧರ ವಿಜ್ಞಾನವಾದವೇ ಆಗಿದೆ. ಇದೊಂದು ಬಗೆಯಲ್ಲಿ ಸ್ಥೂಲಾಧ್ವೈತವೆನ್ನಬೇಕು.

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಇತಿ-ಮಿತಿಗಳು

ನರಸಿಂಹಭಟ್ಟರ ಚಿಂತನಕ್ರಮದ ಇತಿ-ಮಿತಿಗಳು

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವಿವಿಧವ್ಯಾಖ್ಯೆಗಳು

ಭಟ್ಟರು ಪ್ರತಿಭೆಯನ್ನು ವಿವೇಚಿಸುತ್ತ ಇದು ವಿಶ್ಲೇಷಣೆಗೆ ಎಟುಕದೆ ನಿಲ್ಲುವುದೇ ಭಾರತೀಯಸೌಂದರ್ಯಮೀಮಾಂಸೆಯ ಒಂದು ಸ್ವಾರಸ್ಯಕರಾಂಶವೆಂದು ಗುರುತಿಸಿರುವುದು ಮೆಚ್ಚುವಂತಿದೆ (ಪು. ೧೪೨). ಹೀಗೆಯೇ ನಮ್ಮ ವಿವಿಧಶಾಸ್ತ್ರಕಾರರು ಸೌಂದರ್ಯ ಮತ್ತು ಸೌಂದರ್ಯಮೀಮಾಂಸೆಗಳನ್ನು ಉಪೇಕ್ಷಿಸಿದರೂ ಸೌಂದರ್ಯಮೀಮಾಂಸಕರು ಮಾತ್ರ ಶಾಸ್ತ್ರಗಳನ್ನು ಉಪೇಕ್ಷಿಸಲಿಲ್ಲವೆಂದು ಹೇಳಿರುವುದು ಬೆಲೆಯುಳ್ಳ ಮಾತು (ಪು. ೧೪೩). ಅಂತೆಯೇ ಅಭಿಧಾ-ಲಕ್ಷಣಾ-ವ್ಯಂಜನಾವೃತ್ತಿಗಳನ್ನು ಸ್ಥೂಲ-ಸೂಕ್ಷ್ಮ-ಸುಂದರಗಳೆಂದು ಗುರುತಿಸಿರುವುದು ಬೋಧಪ್ರದ.

The Universal Canvas of the Mahabharata:

Complexity of Characters

This selfsame impulse is visible in the characters of Duryodhana and such others in a tangential fashion. Nobody regards Duryodhana and Dusshyasana as fools. There is no dearth of “analysts” or critics who regard Duryodhana as a tragic hero based on the premise that his behavior and actions are natural to his basic character. The dense intensity of blind attachment that pervades a person who is driven by desire and anger is depicted in the Mahabharata in an eye-arresting manner.