“ಅಭಿನವಭಾರತಿ”ಯ ಕೆಲವೊಂದು ವೈಶಿಷ್ಟ್ಯಗಳು — ಸಾಹಿತ್ಯದಲ್ಲಿ ದೃಶ್ಯಕಾವ್ಯದ ಮೇಲ್ಮೆ
ಸಾಹಿತ್ಯದಲ್ಲಿ ದೃಶ್ಯಕಾವ್ಯದ ಮೇಲ್ಮೆ
ಅಭಿನವಭಾರತಿಯ ಮೊದಲಿಗೇ ದೃಶ್ಯಕಾವ್ಯದ ಮೇಲ್ಮೆಯನ್ನು ಅಭಿನವಗುಪ್ತನು ಹೇಳಿದ್ದಾನೆ. ಈ ಭಾವವನ್ನು ಕೃತಿಯ ಆದ್ಯಂತ ಅಲ್ಲಲ್ಲಿ ಬಿತ್ತರಿಸಿದ್ದಾನೆ ಕೂಡ. ವಿಶೇಷತಃ “ರಸಾಧ್ಯಾಯ”ದಲ್ಲಿ ಈ ಸಂಗತಿಯನ್ನು ಮತ್ತೆ ಪ್ರಸ್ತಾವಿಸುತ್ತಾನೆ. ಅಲ್ಲದೆ ಈ ಬಗೆಯಲ್ಲಿ ದೃಶ್ಯಕಾವ್ಯದಲ್ಲಿರುವ ರಸಪಾರಮ್ಯಕ್ಕೆ ಕಾರಣವನ್ನೂ ಹೇಳುತ್ತಾನೆ. ಮುಖ್ಯವಾಗಿ ಇಲ್ಲಿ ಚತುರ್ವಿಧಾಭಿನಯಗಳೂ ಸಮುಚಿತವಾದ ವೃತ್ತಿ-ಪ್ರವೃತ್ತಿಗಳೂ ಸೇರಿರುತ್ತವೆ; ಸಹೃದಯರಿಗೆ ಪ್ರತ್ಯೇಕವಾಗಿ ಕಲ್ಪಿಸಿಕೊಳ್ಳುವ ಶ್ರಮವಿಲ್ಲದೆಯೇ ವಿಭಾವಾನುಭಾವಸಾಮಗ್ರಿಯು ಇಂದ್ರಿಯಗೋಚರವಾಗುತ್ತದೆ. ಇಲ್ಲೆಲ್ಲ ತನ್ನ ಗುರುವಾದ ಭಟ್ಟತೌತನ ಪಾಠದ ಫಲವಂತಿಕೆಯನ್ನು ಚೆನ್ನಾಗಿ ಕಾಣಿಸಿದ್ದಾನೆ: